ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕರೋನಾ ಸೋಂಕಿತರ ಸಾವು ನೋವು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುತ್ತಲೇ ಇದ್ದಾರೆ. ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ ಮಾಡಬೇಕು ಅಂತಿದೆ ಸರ್ಕಾರ. ಆದ್ರೆ, ಚಿಕ್ಕಬಳ್ಳಾಪುರದಲ್ಲಿ ದೆಲ್ಲವನ್ನ ಗಾಳಿಗೆ ತೂರಿ ಅದ್ಧೂರಿ ಕರಗ ಉತ್ಸವ ಮಾಡಲಾಗಿದೆ.
ಕೋವಿಡ್ ಮಾರ್ಗಸೂಚಿ ಪ್ರಕಾರ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧವಿದೆ. ಆದ್ರೆ, ಪ್ರತಿ ವರ್ಷದಂತೆ ಈ ವರ್ಷವು ನಗರದಲ್ಲಿ ಕರಗ ಉತ್ಸವ ಮಾಡಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಏನೂ ಪಾಲಿಸದೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಾಗಿದೆ. ಪೊಲೀಸ್ ಇದನ್ನು ನೋಡಿಕೊಂಡು ಏನು ಮಾಡ್ತಿತ್ತು ಅನ್ನೋ ಪ್ರಶ್ನೆ ಮೂಡಿದೆ.