ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಪ್ರತಿಭಟಿಸುತ್ತಿದ್ದಾರೆ. ಜೊತೆಗೆ ನನ್ನನ್ನೂ ಬಂಧಿಸಿ ಎನ್ನುವ ಅಭಿಯಾನ ನಡೆಸಿದೆ. ಚಿಕ್ಕಮಗಳೂರಲ್ಲಿ ಮಾಜಿ ಸಚಿವ ಸಿ.ಟಿ ರವಿ, ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್, ಮಾಜಿ ಶಾಸಕ ಸುರೇಶ್ ಕುಮಾರ್ ಸೇರಿ ಅನೇಕ ನಾಯಕರು ಬೋರ್ಡ್ ಹಿಡಿದು ನನ್ನನ್ನೂ ಬಂಧಿಸಿ ಎಂದು ಪ್ರತಿಭಟನೆ ನಡೆಸಿದರು.
ಬಿಜೆಪಿಯ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ ಮಾಡಿಕೊಂಡಿದೆ. ಅದುವೇ ಬಿಜೆಪಿ ಶಾಸಕ ಯತ್ನಾಳ ನೀಡಿದ ಹೇಳಿಕೆ. 40 ಸಾವಿರ ಕೋಟಿ ಅಕ್ರಮ ಗಂಭೀರ ಆರೋಪವನ್ನೇ ಕಾಂಗ್ರೆಸ್ ಬಳಸಿಕೊಂಡಿದೆ. ಬಿಜೆಪಿಗರೆಲ್ಲರೂ ನನ್ನನ್ನೂ ಬಂಧಿಸಿ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿರುವ ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಬಿಜೆಪಿಯ ಅಧ್ಯಕ್ಷರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತವೆಂದು ಎಕ್ಸ್ ನಲ್ಲಿ ಬರೆಯುವ ಮೂಲಕ ತಿರುಗೇಟು ನೀಡಿದೆ.