ತಪ್ಪು ಮಾಡಿದವರನ್ನು ಸುಮ್ನೆ ಬಿಡಬೇಕಾ?: ಸಿಎಂ ಸಿದ್ದರಾಮಯ್ಯ

161

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಕರಸೇವಕರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಂಗಳವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಕೋರ್ಟ್ ನಿರ್ದೇಶನದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ತಪ್ಪು ಮಾಡಿದವರನ್ನು ಸುಮ್ನೆ ಬಿಡಬೇಕಾ ಎಂದು ಪ್ರಶ್ನಿಸಿದರು.

ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಪೊಲೀಸರಿಗೆ ಹೇಳಲಾಗಿದೆ. ನಿರಪರಾಧಿಗಳನ್ನು ಬಂಧಿಸುವ ಕೆಲಸವನ್ನು ನಮ್ಮ ಸರ್ಕಾರ ಯಾವತ್ತೂ ಮಾಡಿಲ್ಲ ಎಂದರು. ಇನ್ನು ರಾಮ ಮಂದಿರ ಉದ್ಘಾಟನೆ ದಿನ ಸರ್ಕಾರಿ ರಜೆಗೆ ಬಿಜೆಪಿ ಆಗ್ರಹಿಸಿರುವ ಬಗ್ಗೆ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಕಾರ್ಯಕ್ರಮ ಮಾಡುತ್ತಿದೆ. ಅವರೇ ರಜೆ ನೀಡಲಿ ಎಂದರು.




Leave a Reply

Your email address will not be published. Required fields are marked *

error: Content is protected !!