ಎಲೆಕ್ಷನ್ ಬಂತು.. ಹಿಂದೂ-ಮುಸ್ಲಿಂ ಹೇಳಿಕೆ ಬಲು ಜೋರು..

135

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿ ಭರ್ಜರಿಯಾಗಿ ನಡೆದಿದೆ. ಹೀಗಾಗಿ ರಾಜಕೀಯ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೈಸೂರಿನಲ್ಲಿ ಬಸ್ ನಿಲ್ದಾಣ ನಿರ್ಮಾಣ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿವಾದ ಸೃಷ್ಟಿಸಿದರು.

ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾ ಎಂದಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತವೆ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಜೋರಾಗಿದೆ. ಅದು ಹೆಚ್ಚು ಚರ್ಚೆಗೆ ಬರುವುದು ಹಿಂದೂ-ಮುಸ್ಲಿಂ ಸಮುದಾಯದ ಆಧಾರದ ಮೇಲೆ ಹೇಳಿಕೆಗಳನ್ನು ನೀಡಿದಾಗ. ಸಿದ್ದರಾಮಯ್ಯನವರಿಗೆ ಕುಂಕುಮ ಹಚ್ಚಿದವರು ಕಂಡರೆ ಆಗಲ್ಲ, ವಂದೇ ಮಾತರಂ ಹಾಡಲು ಸಿದ್ಧರಿಲ್ಲ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಹೀಗಾಗಿ ಕೈ-ಕಮಲ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!