ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾರ್ಚ್ 4ರಿಂದ ವಿಧಾನಸಭಾ ಅಧಿವೇಶನ ಶುರುವಾಗಿದೆ. ಮೊದಲ ಎರಡು ದಿನ ಒಂದು ದೇಶ ಒಂದು ಚುನಾವಣೆ ವಿಷಯ ಚರ್ಚೆಗೆ ಮೀಸಲಿಡಲಾಗಿದೆ. ಅದರಂತೆ ಈ ಬಗ್ಗೆ ಚರ್ಚೆ ಶುರುವಾಗಿದ್ದು, ಇದಕ್ಕೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಸಭಾಪತಿ ವಿಶ್ವವೇಶ್ವರಯ್ಯ ಹೆಗಡೆ ಕಾಗೇರಿ ಅವರು ಈ ವಿಷಯವನ್ನ ಚರ್ಚೆಗೆ ತಂದರು. ಇದಕ್ಕೆ ಕಾಂಗ್ರೆಸ್ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ರು. ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಆರ್ ಎಸ್ಎಸ್ ಅಜೆಂಡ್ ಎಂದು ಹೇಳಿ ಪ್ರತಿ ಹರಿದು ಆಕ್ರೋಶ ಹೊರ ಹಾಕಿದ್ರು. ಹೀಗಿದ್ರೂ ಚರ್ಚೆಗೆ ಸ್ಪೀಕರ್ ಅವಕಾಶ ನೀಡಿದ್ರು. ಆಗ ಕಾಂಗ್ರೆಸ್ ನಾಯಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ರು.