ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ ಕನ್ನಡಪರ, ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಕರ್ನಾಟಕ ಬಂದ್ ಕರೆ ಕೊಡಲಾಗಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಕರ್ಫ್ಯೂ ಜಾರಿ ಮಾಡಲಾಗಿದೆ.
ಈ ಕುರಿತು ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಮುಂಜಾಗ್ರತ ಕ್ರಮವಾಗಿ ನಗರದಲ್ಲಿ ಇಂದು ರಾತ್ರಿ 12 ಗಂಟೆಯಿಂದ ನಾಳೆ ರಾತ್ರಿ 12 ಗಂಟೆಯ ತನಕ ಕರ್ಫ್ಯೂ ಜಾರಿ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಂತೆ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ ಎಂದಿದ್ದಾರೆ.
ಇನ್ನು ತಮಿಳು ಭಾಷಿಕರು ಹೆಚ್ಚಿಗೆ ವಾಸವಿರುವ ನಗರ, ಪ್ರದೇಶ, ಚಿತ್ರಮಂದಿರಗಳ ಸುತ್ತಮುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಪ್ರತಿಭಟನೆ, ಮೆರವಣಿಗೆ, ರ್ಯಾಲಿಗೆ ಅವಕಾಶ ಇರುವುದಿಲ್ಲ. ಈ ಕುರಿತು ಸಂಘಟನೆಯವರಿಗೆ ನೋಟಿಸ್ ನೀಡಲಾಗಿದೆ. ಫ್ರೀಡ್ಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ ಅಂತಾ ತಿಳಿಸಿದ್ದಾರೆ.