ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಕರ್ನಾಟಕ ಬಂದ್ ನಡೆಸಲಾಗ್ತಿದೆ. ರೈತಪರ ಸಂಘಟನೆ, ಕಾರ್ಮಿಕಪರ ಸಂಘಟನೆ, ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆ ಜೋರಾಗಿದೆ. ಹೀಗಾಗಿ ಗುಪ್ತಚರ ಮೂಲಗಳಿಂದ ಮಾಹಿತಿ ಪಡೆದಿರುವ ಸಿಎಂ ಅವರು ರೈತರಿಗೆ ಸಂದೇಶ ನೀಡಲು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗ್ತಿದೆ. ಅಲ್ದೇ, ಫೇಸ್ ಬುಕ್ ಮೂಲಕ ಲೈವ್ ಬರಬಹುದು ಎನ್ನಲಾಗ್ತಿದೆ.