Search

ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

310

ಪ್ರಜಾಸ್ತ್ರ ಸುದ್ದಿ

ಜಮಖಂಡಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಸೆಪ್ಟೆಂಬರ್ 28 ರಂದು ರೈತಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ನಿಮಿತ್ಯ, ತಾಲೂಕಿನ ಚಿಕ್ಕಲಕಿಕ್ರಾಸ್‍ನಲ್ಲಿ ವಿಜಯಪೂರ-ಧಾರವಾಡ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಯ್ತು.

ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳಾದ ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಖಾಸಗಿಕರಣ, ಕಾರ್ಮಿಕ ವಿರೋಧಿ ನಿಯಮಗಳನ್ನು ವಿರೋಧಿಸಿ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ಮಾಡಿ ಉಪತಹಶೀಲ್ದಾರ್ ವೈ.ಎಚ್.ದ್ರಾಕ್ಷೀ ಅವರಿಗೆ ಮನವಿ ಸಲ್ಲಿಸಲಾಯ್ತು.

ನಿರಸ ಪ್ರತಿಕ್ರಿಯೆ: ಇನ್ನು ಕರ್ನಾಟಕ ಬಂದ್ ನಲ್ಲಿ ಸಾವಳಗಿಯಲ್ಲಿ ನಿರಸ ಪ್ರತಿಕ್ರೀಯೆ ವ್ಯಕ್ತವಾಗಿದೆ. ಎಂದಿನಂತೆ ವ್ಯಾಪಾರ ವಹಿವಾಟು ನಡೆಯುವುದರೊಂದಿಗೆ ಬಂದ್ ಗೆ ಬಂಬಲ ನೀಡಲಿಲ್ಲ.




Leave a Reply

Your email address will not be published. Required fields are marked *

error: Content is protected !!