ಪ್ರಜಾಸ್ತ್ರ ಅಪರಾಧ ಸುದ್ದಿ
ಬೀದರ್: ಬಸವಕಲ್ಯಾಣ ಪಟ್ಟಣದಲ್ಲಿರುವ ಹರ್ಷಾ ಕಾಂಪ್ಲೆಕ್ಸ್ ಹತ್ತಿರದ ಎಟಿಎಂನಲ್ಲಿ ಗುರುವಾರ ಮುಂಜಾನೆ ಕಳ್ಳತನ ನಡೆಸಲಾಗಿದೆ. ಕರ್ನಾಟಕ ಬ್ಯಾಂಕ್ ಎಟಿಎಂ ಮುರಿದು 6.50 ಲಕ್ಷ ರೂಪಾಯಿ ದರೋಡೆ ಮಾಡಲಾಗಿದೆ.
ಎಟಿಎಂಗೆ ನುಗ್ಗಿದ ಕಳ್ಳರು, ಗ್ಯಾಸ್ ಕಟರ್ ಮೂಲಕ ಎಟಿಎಂ ಮಷಿನ್ ಮುರಿದಿದ್ದಾರೆ. ಇದೆಲ್ಲವೂ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 10 ನಿಮಿಷದಲ್ಲಿ ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.