ಪ್ರಜಾಸ್ತ್ರ ಅಪರಾಧ ಸುದ್ದಿ
ಯಲಬುರ್ಗಾ: ಕರ್ನಾಟಕದಲ್ಲಿ ಇದುವರೆಗೂ ನಡೆಯದ ಅತಿದೊಡ್ಡ ಬ್ಯಾಂಕ್ ದರೋಡೆ ಪ್ರಕರಣ ನಡೆದಿದೆ. ಬರೋಬ್ಬರಿ 1 ಕೋಟಿಗೂ ಅಧಿಕ ಹಣ ಹಾಗೂ ಆಭರಣವನ್ನ ದರೋಡೆ ಮಾಡಿಕೊಂಡು ಹೋಗಿದ್ದಾರೆ. ಈ ಘಟನೆ ರಾಜ್ಯದಲ್ಲಿಯೇ ಆತಂಕ ಸೃಷ್ಟಿಸಿದೆ.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಬರೋಬ್ಬರಿ 1 ಕೋಟಿಗೂ ಅಧಿಕ ಹಣ ಹಾಗೂ ಆಭರಣ ಕಳ್ಳತನ ಮಾಡಲಾಗಿದೆ. ಇದರ ಜೊತೆಗೆ ಖತರ್ನಾಕ್ ಖದೀಮರು ಹಾರ್ಡ್ ಡಿಸ್ಕ್ ಸಮೇತ ಸಿಸಿಟಿವಿಯನ್ನ ಸಹ ತೆಗೆದುಕೊಂಡು ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಜಿ.ಸಂಗೀತ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಬ್ಯಾಂಕ್ ದರೋಡೆ ಮಾಡಿದ ಕಳ್ಳರ ಬಂಧನದ ಕಾರ್ಯಾಚರಣೆಗೆ ಮುಂದಾಗಿದ್ದಾರೆ.