ಬಜೆಟ್ ಅಧಿವೇಶನ.. ವಿಪಕ್ಷಗಳ ಕೈಯಲ್ಲಿ ಹಲವು ಅಸ್ತ್ರ

347

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾರ್ಚ್ 4ರಿಂದ ಬಜೆಟ್ ಅಧಿವೇಶನ ಶುರುವಾಗುತ್ತಿದೆ. ಮೊದಲ ಎರಡು ದಿನ ಒಂದು ದೇಶ ಒಂದು ಚುನಾವಣೆ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ. ಮಾರ್ಚ್ 8ರಂದು ಬಜೆಟ್ ಮಂಡನೆಯಾಗಲಿದೆ. ಬಳಿಕ ಮಾರ್ಚ್ 31ರ ತನಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ.

ಈ ವೇಳೆ ರಾಜ್ಯ ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ತಯಾರಿಯಾಗಿವೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ. ಅಗತ್ಯ ವಸ್ತುಗಳ ಬೆಲೆ ಏರಿಕೆ. ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಅದರಿಂದ ಸಂಭವಿಸ್ತಿರುವ ಸಾವು ನೋವು ಹಾಗೂ ಕಳೆದೆರಡು ದಿನಗಳಿಂದ ಭಾರಿ ಚರ್ಚೆಯಲ್ಲಿರುವ ರಮೇಶ ಜಾರಕಿಹೊಳಿ ಪ್ರಕರಣ. ಈ ಎಲ್ಲ ಅಸ್ತ್ರಗಳನ್ನ ಇಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ.




Leave a Reply

Your email address will not be published. Required fields are marked *

error: Content is protected !!