ನ್ಯೂಸ್ ಡೆಸ್ಕ್:
ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಡಿಸೆಂಬರ್ 5ರಂದು ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸಕಲ ಸಿದ್ಧತೆಗಳನ್ನ ಮಾಡಿಕೊಳ್ತಿವೆ. ಇದೀಗ ನೀತಿ ಸಂಹಿತೆ ಅನ್ವಯದ ದಿನಾಂಕ ಹತ್ತಿರ ಬರ್ತಿದೆ.
ಚುನಾವಣೆ ಆಯೋಗ ತಿಳಿಸಿರುವಂತೆ ನವೆಂಬರ್ 11ರಿಂದ ನೀತಿ ಸಂಹಿತೆ ಅನ್ವಯ ಆಗಲಿದೆ. ಹೀಗಾಗಿ ಉಪ ಚುನಾವಣೆ ನಡೆಯುವ 15 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಯೋಜನೆಗಳ ಕಾರ್ಯಕ್ಕೆ ಕೆಲ ದಿನಗಳ ಕಾಲ ಬ್ರೇಕ್ ಬೀಳಲಿದೆ.
ಬೆಂಗಳೂರು ನಗರ ಸೇರಿದಂತೆ ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಹಾವೇರಿ, ಮಂಡ್ಯ, ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ, ಚುನಾವಣೆ ಪ್ರಕ್ರಿಯೆ ಮುಗಿಯುವ ತನಕ ನೀತಿ ಸಂಹಿತೆ ಜಾರಿಯಲ್ಲಿರುತ್ತೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸ್ವತಂತ್ರವಾಗಿ ಕಣಕ್ಕೆ ಇಳಿಯುತಿದ್ದು, ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕೈ ಪಾಳೆಯದಿಂದ ಮೊದಲ ಹಂತದ ಪಟ್ಟಿ ಸಹ ಬಿಡುಗಡೆಯಾಗಿದೆ. ಇದೀಗ ಇರೋದು ಜೆಡಿಎಸ್ ಹಾಗೂ ಬಿಜೆಪಿ ಕಡೆಯಿಂದ. ಬಿಜೆಪಿ ಸ್ಥಿತಿ ಸದ್ಯಕ್ಕೆ ಡೋಲಾಯಮಾನವಾಗಿದೆ. ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ವಿಚಾರದಿಂದಾಗಿ ಸ್ವಂತ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲು ಆಗ್ತಿಲ್ಲ. ಹೀಗಾಗಿ ಒಳಗೊಳಗೆ ಮುಸುಕಿನ ಗುದ್ದಾಟ ನಡೆದಿದೆ. ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ತೀರ್ಪು ಕಾಯ್ದಿರಿಸಿದ್ದು ಫುಲ್ ಟೆನ್ಷನ್ ನಲ್ಲಿ ದಿನಗಳನ್ನ ದೂಡಲಾಗ್ತಿದೆ.