ಬೆಂಗಳೂರು: ಡಿಸೆಂಬರ್ ನಲ್ಲಿ 15 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ ಕುರಿತಂತೆ, ಕಾಂಗ್ರೆಸ್ ಬೆಂಗಳೂರಿನಲ್ಲಿ ಸಭೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ನೇತೃತ್ವದಲ್ಲಿ ಸಭೆ ನಡೆಸಲಾಗ್ತಿದೆ.
ಈ ಒಂದು ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಎಸ್.ಆರ್ ಪಾಟೀಲ, ಕೆ.ಜೆ ಜಾರ್ಜ್, ಕೆ.ಆರ್ ರಮೇಶ ಕುಮಾರ, ಉಮಾಶ್ರೀ, ಮೋಟಮ್ಮ, ರಾಣಿ ಸತೀಶ, ಹೆಚ್.ಎಂ ರೇವಣ್ಣ, ಟಿ.ಬಿ ಜಯಚಂದ್ರ, ಬಿ.ಕೆ ಹರಿಪ್ರಸಾದ, ಮುನಿಯಪ್ಪ, ಕೆ.ರೆಹಮಾನ ಖಾನ್, ಎಐಸಿಸಿ ಕಾರ್ಯದರ್ಶಿ ಸಲೀಂ ಅಹಮದ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದಾರೆ.