ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಇನ್ನೇನು ಕೆಲ ಘಂಟೆಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಇದೀಗಿ ಯಾರು ಮುನ್ನಡೆ ಸಾಧಿಸಿದ್ದಾರೆ ಅನ್ನೋದು ನೋಡುವುದಾದ್ರೆ, ಬೆಳಗಾವಿ ಲೋಕಭಾ ಕ್ಷೇತ್ರದಲ್ಲಿ 24ನೇ ಸುತ್ತಿನಲ್ಲಿಯೂ ಬಿಜೆಪಿಯ ಮಂಗಳಾ ಅಂಗಡಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಸತೀಶ ಜಾರಕಿಹೊಳಿ ಹಿನ್ನಡೆ ಸಾಧಿಸಿದ್ದಾರೆ.
ಇನ್ನು ಬಸವಕಲ್ಯಾಣದಲ್ಲಿ 9ನೇ ಸುತ್ತಿನಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿಯಿಂದ ಶರಣು ಸಲಗಾರ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ನಿಂದ ಮಾಲಾ ನಾರಾಯಣರಾವ್ ಸ್ಪರ್ಧಿಸಿದ್ದಾರೆ. 7355 ಮತಗಳಿಂದ ಸಲಗಾರ ಮುನ್ನಡೆ ಸಾಧಿಸಿದ್ದಾರೆ.
ಮಸ್ಕಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 9ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬಸನಗೌಡ ಕಾಂಗ್ರೆಸ್ ನಿಂದ, ಪ್ರತಾಪಗೌಡ ಬಿಜೆಪಿಯಿಂದ, ಖಾದ್ರಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದಾರೆ.