ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆದಾಯ ತೆರಿಗೆ ದಾಳಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಭರ್ಜರಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ಹರಿಹಾಯುತ್ತಿದ್ದಾರೆ. ಇಂದು ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿಎಂ ಕಾಲೆಳೆದಿದೆ.
ಸಿದ್ದರಾಮಯ್ಯ ಸೂಟ್ ಕೇಸ್ ಹಿಡಿದಿರುವ ಫೋಟೋಗೆ ಸಿಎಂ ಎಂದರೆ ಕಲೆಕ್ಷನ್ ಮಾಸ್ಟರ್ ಎನ್ನುವ ಅರ್ಥ ಬರುವಂತೆ ಪೋಸ್ಟರ್ ಮಾಡಲಾಗಿದೆ. ಹಿಂದಗಡೆ ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಫೋಟೋಗಳಿವೆ. ಎಟಿಎಂ ಸರ್ಕಾರ ಎಂದು ಬರೆಯಲಾಗಿದೆ.
ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಗೆ ಹೈಕಮಾಂಡ್ ಮೊದಲನೇ ಹಂತದ ಟಾರ್ಗೆಟ್ 1 ಸಾವಿರ ಕೋಟಿ. ತೆಲಂಗಾಣ ಕಾಂಗ್ರೆಸ್ ಗೆ 300 ಕೋಟಿ, ಮಿಜೋರಾಂ ಕಾಂಗ್ರೆಸ್ ಗೆ 100 ಕೋಟಿ, ಛತ್ತೀಸಗಡ ಕಾಂಗ್ರೆಸ್ ಗೆ 200 ಕೋಟಿ, ರಾಜಸ್ಥಾನ ಕಾಂಗ್ರೆಸ್ ಗೆ 200 ಕೋಟಿ, ಮಧ್ಯಪ್ರದೇಶ ಕಾಂಗ್ರೆಸ್ 200 ಕೋಟಿ. ಕಮಿಷನ್, ಕಲೆಕ್ಷನ್ ಮೂಲಕ ಸಾವಿರಾರು ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಂಚುವ ಮುನ್ನವೇ ಸಿಕ್ಕಿಬಿದ್ದಿದೆ ಎಂದು ಆರೋಪಿಸಿತ್ತು.