ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದಿಂದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರಕ್ಕೆ ಅಲ್ಲಾಭಕ್ಷ ಮಹಿಬೂಬ್ ಸಾಬ್ ಬಿಜಾಪುರ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರಕ್ಕೆ ದುರ್ಗಪ್ಪ ಬಿಜವಾಡ ಹಾಗೂ ಬೆಳಗಾವಿಯ ಉತ್ತರ ಕ್ಷೇತ್ರಕ್ಕೆ ಲತೀಫ್ ಖಾನ್ ಪಠಾಣ್ ಅಭ್ಯರ್ಥಿಗಳೆಂದು ಘೋಷಿಸಿದ್ದಾರೆ.