ಬಾಗಲಕೋಟೆಯಲ್ಲಿ ನಾಳೆ ನಿಷೇದಾಜ್ಞೆ

169

ಪ್ರಜಾಸ್ತ್ರ ಸುದ್ದಿ

ಮುಧೋಳ: ಮೇ 13 ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

5 ಜನ ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಗುಂಪಾಗಿ ತಿರುಗಾಡುವಂತಿಲ್ಲ. ಶಸ್ತ್ರ, ಬಡಿಗೆ, ದೇಹಕ್ಕೆ ಹಾನಿಯಾಗುವಂತಹ ಶಸ್ತ್ರಗಳ ಸಾಗಾಣಿಕೆಗೆ ನಿರ್ಬಂಧ. ಮುಧೋಳ ತಾಲೂಕಿನಾದ್ಯಂತ ಯಾವುದೇ ರೀತಿಯ ವಿಜಯೋತ್ಸವ, ಮೆರವಣಿಗೆ, ಸಂಭ್ರಮಾಚರಣೆ, ಸಂಗೀತ ಕಾರ್ಯಕ್ರಮ ನಿಷೇದಿಸಲಾಗಿದೆ.

ಇನ್ನು ಸಾರ್ವಜನಿಕವಾಗಿ ಪ್ರಚೋದನಕಾರಿಯಾಗಿ ಭಾಷಣ ಹಾಗೂ ಯಾವುದೇ ಕಾನೂನು ಬಾಹಿರ ಕೃತ್ಯಗಳನ್ನು ನಿಷೇದಿಸಲಾಗಿದೆ. ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!