ಪ್ರಜಾಸ್ತ್ರ ಸನಿಮಾ ಡೆಸ್ಕ್
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಪಕರಿಬ್ಬರು ಕಿತ್ತಾಡಿಕೊಂಡಿದ್ದಾರೆ. ಭಾ.ಮಾ ಹರೀಶ್, ಎನ್.ಎಂ ಸುರೇಶ್ ಹಾಗೂ ಎ.ಗಣೇಶ್ ಕಿತ್ತಾಡಿಕೊಂಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಸಿಲ್ಲ. ಚುನಾವಣೆ ನಡೆಸಬೇಕೆಂದು ಸಂಬಂಧಪಟ್ಟ ಇಲಾಖೆಯಿಂದ ಆದೇಶ ಬಂದರೂ ನಡೆಸಿಲ್ಲವೆಂದು ಭಾ.ಮಾ ಹರೀಶ್, ಎನ್.ಎಂ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲೆಕ್ಷನ್ ಮಾಡದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.