ಕರ್ನಾಟಕಕ್ಕೆ ಬರ ಪರಿಹಾರ, ಚು.ಆ ಒಪ್ಪಿದೆ: ಕೇಂದ್ರ ಸರ್ಕಾರ

89

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ಸೋಮವಾರ ನಡೆಯಿತು. ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆಗೆ ಚುನಾವಣೆ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಕೋರ್ಟ್ ಗೆ ತಿಳಿಸಿದೆ.

ನ್ಯಾಯಮೂರ್ತಿ ಬಿ.ಆರ್ ಗವಾಯಿ, ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ಅಟಾರ್ನಿ ಜನರಲ್ ಆರ್.ವೆಂಕಟರಮಣ್ ಅವರು, ಬರ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದರು.

ಚುನಾವಣೆ ಆಯೋಗ ಒಪ್ಪಿಗೆ ನೀಡಿರುವುದರಿಂದ ಹೆಚ್ಚಿನ ವಾದ ಅಗತ್ಯವಿಲ್ಲ. ಶೀಘ್ರವೇ ಕ್ರಮ ತೆಗೆದುಕೊಳ್ಳಲಾಗುವುದು. ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡುವಂತೆ ಮನವಿ ಸಲ್ಲಿಸಿದರು. ಅಲ್ಲಿಯವರೆಗೆ ಏನಾದರೂ ಆಗಬಹುದು ಎಂದು ಹೇಳಿದರು. ಎಜೆ ವಿಶ್ವಾಸದಿಂದಾಗಿ ವಿಚಾರಣೆ ಮುಂದೂಡಲು ಯಾವುದೇ ಸಮಸ್ಯೆಯಿಲ್ಲವೆಂಧು ಕರ್ನಾಟಕ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದರು.




Leave a Reply

Your email address will not be published. Required fields are marked *

error: Content is protected !!