ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕರ್ನಾಟಕ ಜನಸ್ಪಂದನ ಟ್ರಸ್ಟ್ ನ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಮಹಾಂತೇಶ ನೂಲಾನವರನ್ನ ಆಯ್ಕೆ ಮಾಡಲಾಗಿದೆ. ಇವರ ಜೊತೆಗೆ ವಿವಿಧ ಪದಾಧಿಕಾರಿಗಳನ್ನ ಸಹ ನೇಮಕ ಮಾಡಲಾಗಿದೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರವಿ ಮಣೂರ, ಜಿಲ್ಲಾ ಪ್ರಧಾನ ಸಂಚಾಲಕರಾಗಿ ಭಾಗಣ್ಣ ತಮದೊಡ್ಡಿ, ಸಂಚಾಲಕರಾಗಿ ಕಲ್ಲಪ್ಪ ನಂದರಗಿ, ಕಾರ್ಯದರ್ಶಿಯಾಗಿ ಶರಣಪ್ಪ ಮೇತ್ರಿಯವರನ್ನ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಜನಸ್ಪಂದನ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹನುಮಂತಪ್ಪ ಮೇಡೇಗಾರ ತಿಳಿಸಿದ್ದಾರೆ.