ಕರ್ನಾಟಕ ಕಾರ್ಮಿಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಮಹಾದೇವ ತಳವಾರ ಆಯ್ಕೆ

280

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ಕಾರ್ಮಿಕರ ವೇದಿಕೆ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಮಹಾದೇವ ತಳವಾರ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಡೋಣುರು ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ರಾ.ಪ್ರಕಾಶ್ ಇವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರು ನಗರದ ಮೋದಿ ರಸ್ತೆ ಹತ್ತಿರದ ಖಾಸಗಿ ಹೋಟೆಲ್ ನಲ್ಲಿ ಸಂಘಟನೆಯ ಸಂಸ್ಥಾಪನೆ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ, ನೂತನವಾಗಿ ಆಯ್ಕೆಯಾದ ಜಿಲ್ಲಾ ಹಾಗೂ ವಿವಿಧ ಪದಾಧಿಕಾರಿಗಳಿಗೆ ನೇಮಕ ಪತ್ರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಮಿಕರ ವೇದಿಕೆ ಸಂಸ್ಥಾಪಕ ಅಧ್ಯಕ್ಷೆ ಮಂಜುಳಾ ನಾಗೇಶ್, ರಾಜ್ಯಾಧಕ್ಷ ರಾ.ಪ್ರಕಾಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಮಹೇಶ್, ಬಿಬಿಎಂಪಿ ಮಾಜಿ ಸದಸ್ಯರಾದ ಎಸ್.ಹೆಚ್ ಪದ್ಮರಾಜ್, ಕೃಷ್ಣಮೂರ್ತಿ, ನಾರಾಯಣಸ್ವಾಮಿ, ಮಾಜಿ ಉಪ ಮಹಾಪೌರ ಜೆ.ಹುಚ್ಚಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!