30 ಕಡೆ ಲೋಕಾಯುಕ್ತ ದಾಳಿ

123

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಂಗಳವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳಿಂದ ವಿವಿಧ ಇಲಾಖೆಯ 6 ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್ ನಾಗರಾಜ್, ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಇಂಜಿನಿಯರ್ ಎನ್.ಸತೀಶ್ ಬಾಬು, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೈಯದ್ ಮುನೀರ್, ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಮಂಜೇಶ್.ಬಿ ಸೇರಿ ಇತರರ ಮೇಲೆ ದಾಳಿ ನಡೆಸಲಾಗಿದೆ.

ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಎಸ್ ಸುರೇಶ್, ಕುಂದಾಣ ಗ್ರಾಮ ಪಂಚಾಯ್ತಿ ಪಿಡಿಒ ಡಿ.ಎಂ ಪದ್ಮನಾಭ್ ಇವರ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು, ರಾಮನಗರ, ಚಿತ್ರದುರ್ಗ, ಬಳ್ಳಾರಿ ಸೇರಿ ಅನೇಕ ಕಡೆ ದಾಳಿ ನಡೆಸಲಾಗಿದೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದ ಮನೆ, ಕಚೇರಿ, ಸಂಬಂಧಿಕರ ಮನೆ, ಬೇನಾಮಿ ವ್ಯಕ್ತಿಗಳ ಮನೆಯ ಮೇಲೂ ಸಹ ದಾಳಿ ನಡೆಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!