ಪ್ರಜಾಸ್ತ್ರ ಸುದ್ದಿ
ಹಬ್ಬಳ್ಳಿ: ಕರ್ನಾಟಕದ ಕೆಲವು ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ರಾಜ್ಯ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಮಾತನಾಡಿ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ. ಮುಂಬೈನಲ್ಲಿ ಎಷ್ಟು ಮರಾಠಿ ಭಾಷಿಕರಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ಇದನ್ನು ನಾವು ಕೇಳಿದರೆ ಅವರಿಗೆ ಸಮಸ್ಯೆಯಾಗುತ್ತದೆ ಎಂದರು.
ಜನರ ಬಗ್ಗೆ ಕಾಳಜಿ ಇಲ್ಲದವರು ರಾಜಕೀಯ ಹಾಗೂ ಸ್ವಾರ್ಥಕ್ಕಾಗಿ ಹೀಗೆ ಮಾಡುತ್ತಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಕೇಂದ್ರಾಡಳಿತ ಪ್ರದೇಶ ಮಾಡಬೇಕು ಅನ್ನೋ ಆಲೋಚನೆ ಹೇಗೆ ಬಂತು ಅನ್ನೋದು ಗೊತ್ತಿಲ್ಲ. ಇಂತಹ ನಾಯಕರು ಸಮಾಜಕ್ಕೆ ಭಾರ ಎಂದು ತಿರುಗೇಟು ನೀಡಿದರು.