ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಗಲಭೆಕೋರರನ್ನು ಎದುರಿಸಲು ಕಾನೂನು ಬೆಂಬಲ ಹೊಂದಿರುವ ಕರ್ನಾಟಕ ಮಾದರಿಯೊಂದಿಗೆ ಬರುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಸೇರಿ ಹಲವು ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಮಾದರಿ ಅನುಸರಿಸಿದೆ. ಯುಪಿ ಮಾದರಿ ಅನುಸರಿಸುವ ಅಗತ್ಯವಿಲ್ಲ ಎಂದರು.
ಪೊಲೀಸರು ಹಲವು ಆರೋಪಿಗಳ ಹೇಳಿಕೆಗಳನ್ನು ಪಡೆದಿದ್ದಾರೆ. ಕೆಲ ಸಂಘಟನೆಗಳ ವಿರುದ್ಧ ಲೀಡ್ ಪಡೆದಿದ್ದಾರೆ. ಕೆಲ ಹೊಸ ಸಂಘಟನೆಗಳ ಹೆಸರು ಕೇಳಿ ಬಂದಿವೆ. ಪೊಲೀಸರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.