ಬೆಂಗಳೂರು: ವೃತ್ತಿ ರಂಗಭೂಮಿಯಲ್ಲಿ ತರಬೇತಿ ಪಡೆದು, ಅದೆ ಕ್ಷೇತ್ರದಲ್ಲಿ ಮುಂದುವರೆಯಲು ಬಯಸುವ ಯುವಕ ಹಾಗೂ ಯುವತಿಯರಿಗೆ ಶಿಷ್ಯವೇತನ ನೀಡಲಾಗ್ತಿದ್ದು, ಹೀಗಾಗಿ ಮೌಖಿಕ ಸಂದರ್ಶನ ನಡೆಸಲಾಗುತ್ತೆ ಅಂತಾ ಕರ್ನಾಟಕ ನಾಟಕ ಅಕಾಡಮಿ ತಿಳಿಸಿದೆ.
ಜುಲೈ 11ರಂದು ಧಾರವಾಡದ ರಂಗಾಯಣ ಆವರಣದಲ್ಲಿ ಬೆಳಗ್ಗೆ 11.30ಕ್ಕೆ ಸಂದರ್ಶನ ಏರ್ಪಡಿಸಲಾಗಿದೆ. ಹೀಗಾಗಿ ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದೆಂದು ತಿಳಿಸಲಾಗಿದೆ.