ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇಂದು ನಡೆದ ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ನಿರೀಕ್ಷೆಯಿಂದ ಬಿಜೆಪಿಯಿಂದ ಇಬ್ಬರು ಕಾಂಗ್ರೆಸ್ ನಿಂದ ಒಬ್ಬರು ಆಯ್ಕೆಯಾಗಿದ್ದಾರೆ. ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನ ಜೈರಾಮ್ ರಮೇಶ್ ಮೊದಲ ಸುತ್ತಿನಲ್ಲಿ ಆಯ್ಕೆ ಆಗಿದ್ದಾರೆ.
ನಾಲ್ಕನೇ ಅಭ್ಯರ್ಥಿಯ ಫಲಿತಾಂಶ ಕುತೂಹಲ ಮೂಡಿಸಿದೆ. ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ 3, ಕಾಂಗ್ರೆಸ್ 2, ಜೆಡಿಎಸ್ 1 ಅಭ್ಯರ್ಥಿ ಕಣದಲ್ಲಿದ್ದರು. ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅಡ್ಡಮತದಾನ ಮಾಡಿದ್ದಾರೆ. ಇದರಂತೆ ಅನೇಕರು ಮಾಡಿರುವ ಅನುಮಾನವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.