ಪ್ರೊ.ಕೆ ಬಿ ಗುಡಸಿ ಕವಿವಿ ನೂತನ ಕುಲಪತಿ

438

ಪ್ರಜಾಸ್ತ್ರ ಸುದ್ದಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಪ್ರೊ. ಕೆ.ಬಿ. ಗುಡಸಿ, ಅವರು ನೇಮಕಗೊಂಡಿದ್ದು, ಶನಿವಾರ ಅಧಿಕಾರ ಸ್ವೀಕರಿಸಿದರು.

ಪ್ರೊ. ಪ್ರಮೋದ ಗಾಯಿ ನಿವೃತ್ತಿ ನಂತರ ಕಳೆದ ಒಂದೂವರೆ ವರ್ಷದಿಂದ ಕವಿವಿ ಖಾಯಂ ಕುಲಪತಿಗಳಿಲ್ಲದೇ ಕೊರಗುತ್ತಿತ್ತು. ಒಂದೂವರೆ ವರ್ಷದಲ್ಲಿ ಒಟ್ಟು ನಾಲ್ಕು ಜನ ಪ್ರಭಾರಿ ಕುಲಪತಿಗಳು ಅಧಿಕಾರ ವಹಿಸಿಕೊಂಡಿದ್ದರು. ಈಗ ಸರ್ಕಾರ ಖಾಯಂ ಕುಲಪತಿಗಳನ್ನು ನೇಮಕ ಮಾಡಿದ್ದು, ಆಡಳಿತ ವ್ಯವಸ್ಥೆ ಸುಗಮಗೊಳ್ಳುವ ನಿರೀಕ್ಷೆಗಳು ಹೆಚ್ಚಾಗಿವೆ.

ನೂತನ ಕುಲಪತಿ ಪ್ರೊ. ಕೆ. ಬಿ. ಗುಡಸಿ, ಅವರು ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ರಸಾಯನಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜತೆಗೆ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶನಿವಾರ ಪ್ರಭಾರಿ ಕುಲಪತಿಯವರಾದ ಪ್ರೊ. ವಿಶ್ವನಾಥ ಎಂ. ಅವರಿಂದ ಗುಡಸಿ ಶನಿವಾರ ಅಧಿಕಾರ ಸ್ವೀಕರಿಸಿದರು.

ಕುಲಸಚಿವರಾದ ಡಾ. ಕೆ.ಟಿ. ಹನುಮಂತಪ್ಪ, ಮೌಲ್ಯಮಾಪನದ ಕುಲಸಚಿವ ಪ್ರೊ. ರವೀಂದ್ರನಾಥ ಎನ್. ಕದಂ, ಪ್ರಭಾರಿ ಹಣಕಾಸು ಅಧಿಕಾರಿ ಪ್ರೊ. ಆರ್.ಆರ್. ಇದ್ದರು.




Leave a Reply

Your email address will not be published. Required fields are marked *

error: Content is protected !!