ಪರಿಷತ್ ಉಪ ಚನಾವಣೆ: ಕೈ ಅಭ್ಯರ್ಥಿಗಳು ಅವಿರೋಧ ಆಯ್ಕೆ!

238

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ತಿನ ಮೂರು ಸ್ಥಾನಗಳು ಖಾಲಿಯಾದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರ ಅಂಗೀಕಾರಗೊಂಡಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್ ಬೋಸರಾಜು ಹಾಗೂ ತಪ್ಪಣ್ಣಪ್ಪ ಕಮಕನೂರು ಅವರು ನಾಮಪತ್ರ ಸಲ್ಲಿಸಿದ್ದು, ಅಂಗೀಕಾರಗೊಂಡಿವೆ. ಪಕ್ಷೇತರ ಅಭ್ಯರ್ಥಿಯಾಗಿ ಡಾ.ಕೆ ಪದ್ಮರಾಜನ್ ಎಂಬುವರು ಸಲ್ಲಿಸಿದ್ದ ಅರ್ಜಿ, ಸೂಚಕರಿಲ್ಲದ ಕಾರಣ ತಿರಸ್ಕಾರಗೊಂಡಿದೆ.

ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಿಲ್ಲ. ಸದನದಲ್ಲಿ ಸಂಖ್ಯಾ ಬಲಾಬಲದ ಲೆಕ್ಕದಲ್ಲಿ ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹೀಗಾಗಿ ವಿಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ. ಆದ್ದರಿಂದ ಕೈನ ಮೂವರು ಅವಿರೋಧವಾಗಿ ಆಯ್ಕೆ ಆಗಲಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ. ಜೂನ್ 30ಕ್ಕೆ ಚುನಾವಣೆ ನಿಗದಿಯಾಗಿದೆ.




Leave a Reply

Your email address will not be published. Required fields are marked *

error: Content is protected !!