ವಿಧಾನಸಭೆ ಅಧಿವೇಶನ ಶುರು: ಅಗಲಿದ ಗಣ್ಯರಿಗೆ ಸಂತಾಪ

240

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದಿನಿಂದ ಮಳೆಗಾಲದ ವಿಧಾನಸಭೆ ಅಧಿವೇಶನ ಶುರುವಾಗಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಶುರುವಾಗಿದೆ. ಮೊದಲಿಗೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗ್ತಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ, ಕೇಂದ್ರ ಮಾಜಿ ಸಚಿವ ಎಂ.ವಿ ರಾಜಶೇಖರನ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗ್ತಿದೆ. ಇನ್ನು 20 ಜನ ಶಾಸಕರಿಗೆ ಕೋವಿಡ್ 19 ಸೊಂಕು ತಗುಲಿದ್ದು ಅವರು ಸದನಕ್ಕೆ ಗೈರಾಗಲಿದ್ದಾರೆ.

ವಿಧಾನಸಭೆ ಸದನ ನಡೆಯುವ ಜಾಗ ಸೇರಿದಂತೆ ಸುತ್ತಲಿನ ಪ್ರದೇಶವನ್ನ ಸಂಪೂರ್ಣವಾಗಿ ಸ್ಯಾನಟೈಸರ್ ಮಾಡಲಾಗಿದೆ. ಕೋವಿಡ್ 19 ಮಾರ್ಗಸೂಚಿ ಅನ್ವಯ ಸದನದ ಕಲಾಪ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!