ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ 19 ಸೋಂಕಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯಿಂದ ಸಾಕಷ್ಟು ಭ್ರಷ್ಟಾಚಾರವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. 10 ಸಾವಿರ ಬೆಡ್ ಗಳ ಟೆಂಡರ್, ಪಿಪಿಇ ಕಿಟ್, ಆಕ್ಸಿಜನ್, ಎನ್ 97 ಮಾಸ್ಕ್, ಟೆಸ್ಟಿಂಗ್ ಸೇರಿದಂತೆ ಹಲವು ವಿಚಾರಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ಒಪ್ಪಿಸಿ ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ.
ಸಿದ್ದರಾಮಯ್ಯ, ಹೆಚ್.ಕೆ ಪಾಟೀಲ, ಕೆ.ಜೆ ಜಾರ್ಜ್, ಆರ್.ವಿ ದೇಶಪಾಂಡೆ ಸೇರಿದಂತೆ ಕಾಂಗ್ರೆಸ್ ನಾಯಕರು ನ್ಯಾಯಾಂಗ ತನಿಖೆಗೆ ಕೊಡಿ ಎನ್ನುತ್ತಿದ್ದಾರೆ. ಇದಕ್ಕೆ ಸಚಿವರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೀಗಾಗಿ ಸದನದಲ್ಲಿ ಇಬ್ಬರ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ.