ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಎಎಸ್ ಅಧಿಕಾರಿಗಳನ್ನು ಮೂರು ವಿಶ್ವವಿದ್ಯಾಲಯಗಳ ಕುಲಸಚಿವರನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಗುಲ್ಬರ್ಗಾ, ಬೆಳಗಾವಿ ಹಾಗೂ ಬೆಂಗಳೂರು ವಿವಿಗೆ ಕುಲಸಚಿವರನ್ನು ನೇಮಿಸಿದೆ.
ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಶರಣಪ್ಪ, ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೆ.ಶಾಂತಲಾ ಹಾಗೂ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಹೇಶ್ ಬಾಬು ಅವರನ್ನು ನೇಮಕ ಮಾಡಿ ಆದೇಶಿಸಿದೆ.