ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಅರ್ಬನ್ ನಕ್ಸಲ್ ಪಟ್ಟವನ್ನು ಕಟ್ಟಲಾಗಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಬಿಜೆಪಿ ನಾಯಕರು ಮಾಡುತ್ತಿರುವ ರಾಜಕೀಯದಲ್ಲಿ ಸದನದಲ್ಲಿ ಟೀಕಿಸಿದ್ದಾರೆ. ಹೀಗಾಗಿ ಬಿಜೆಪಿ ಮುಖಂಡ ಅಮಿತ್ ಮಾಳ್ವಿಯಾ ಕೇಜ್ರಿವಾಲ್ ಅರ್ಬನ್ ನಕ್ಸಲ್ ಎಂದು ಟ್ವೀಟ್ ಮಾಡಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಚಿತ್ರ ಮಾಡಿ ಅಗ್ನಿಹೋತ್ರಿ ಕೋಟಿ ಕೋಟಿ ಗಳಿಕೆ ಮಾಡಿದರು. ಬಿಜೆಪಿಯವರು ಪೋಸ್ಟರ್ ಅಂಟಿಸುವ ಕೆಲಸ ಮಾಡುತ್ತಿದ್ದಾರೆ. ಟ್ಯಾಕ್ಸ್ ಫ್ರೀ ಮಾಡುವ ಬದಲು ಯುಟ್ಯೂಬ್ ಗೆ ಹಾಕಿ ಎಲ್ಲರೂ ಫ್ರೀಯಾಗಿಯೇ ನೋಡುತ್ತಾರೆ ಎಂದು ಕಾಲೆಳೆದಿದ್ದಾರೆ.
ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಬಿ.ಎಸ್ ಸಂತೋಷ್ ಸಹ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.