ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯ ಪೇದೆ ಮತ್ತು ಎಎಸ್ಐಗಳ ಬಡ್ತಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಂತೆ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರಿಗೆ ನೋಟಿಸ್ ನೀಡಲಾಗಿದೆ. ಕರ್ನಾಟಕ ಆಡಳಿತ ನ್ಯಾಯಾಧೀಕರಣವು ನ್ಯಾಯಾಂಗ ನಿಂದನೆ ನೋಟಿಸ್ ನೀಡಿದೆ.
ಮುಖ್ಯ ಪೇದೆ ಮತ್ತು ಎಎಸ್ಐಗಳ ಬಡ್ತಿ ಸರಿಪಡಿಸುವಂತೆ ಈ ಹಿಂದೆ ಕೆಎಟಿ ಆದೇಶ ನೀಡಿತ್ತು. ಆದ್ರೆ, ಇದಕ್ಕೆ ಗೌರವ ಕೊಡದೆ ನಿರ್ಲಕ್ಷ್ಯವಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಟಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರಿಗೆ ನೋಟಿಸ್ ಜಾರಿ ಮಾಡಿದೆ.