ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರಾವಳಿ ಭಾಗದಲ್ಲಿ ಸರಣಿ ಹತ್ಯೆ ಪ್ರಕರಣ ಸಂಬಂಧ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಭೇಟಿಯಾದ ಕಟೀಲ್, ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ನಿಮ್ಮದೆ ಲೋಕಸಭಾ ಕ್ಷೇತ್ರದಲ್ಲಿ 10 ದಿನಗಳಲ್ಲಿ 3 ಕೊಲೆಗಳು ನಡೆದಿವೆ. ಅವುಗಳನ್ನು ತಡೆಯುವಲ್ಲಿ ವಿಫಲರಾಗಿದ್ದೀರಿ. ನೀವು ಬರೀ ಸಂಸದರಲ್ಲ, ರಾಜ್ಯಾಧ್ಯಕ್ಷರು ಆಗಿದ್ದೀರಿ. ಕಾನೂನು ಸುವ್ಯವಸ್ಥೆ ಹಾಳಾದರೆ ಯಾರು ಜವಾಬ್ದಾರರು ಎಂದು ಕಟೀಲ್ ಅವರನ್ನು ಕ್ಲಾಸ್ ತೆಗೆದುಕೊಂಡಿದ್ದಾರೆ.
ಸರಣಿ ಹತ್ಯೆಯ ಘಟನೆಯ ಸಂಬಂಧ ರಾಜ್ಯ ಗೃಹ ಸಚಿವ ಆರಾಗ ಜ್ಞಾನೇಂದ್ರ ಅವರ ವೈಫಲ್ಯದ ವಿರುದ್ಧ ಕೇಂದ್ರ ಗೃಹ ಸಚಿವರು ಕಿಡಿ ಕಾರಿದ್ದಾರೆ. ರಾಜ್ಯದಲ್ಲಿನ ಘಟನೆಯಿಂದಾಗಿ ದೇಶ್ಯಾದ್ಯಂತ ಟೀಕೆಗಳು ವ್ಯಕ್ತವಾಗುತ್ತಿವೆ. ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ತರಾಟೆಗೆ ತೆಗೆದಕೊಂಡಿದ್ದಾರೆ.