ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ಸಾವು

110

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಕಾವೇರಿ ನದಿಗೆ ಪ್ರವಾಸಕ್ಕೆ ಬಂದ ಯುವಕರು ನದಿಯಲ್ಲಿ ಈಜಲು ಹೋಗಿ ಮುಳಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣವಾದ ಬಲಮುರಿ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ.

ಮೈಸೂರು ಮೂಲದ ಧನರಾಜು(21) ಹಾಗೂ ಪ್ರಸನ್ನ(33) ಮೃತ ಯುವಕರು ಎಂದು ತಿಳಿದು ಬಂದಿದೆ. ಪ್ರವಾಸಕ್ಕೆ ಬಂದವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಕೆಆರ್ ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಾಹುತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!