ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾವೇರಿ ನದಿಜೋಡಣೆ ಸಂಬಂಧ ತಮಿಳುನಾಡು ಸರ್ಕಾರ 115 ಕಿಲೋ ಮೀಟರ್ ಉದ್ದದ ಕಾಲುವೆ ನಿರ್ಮಾಣಕ್ಕೆ ಮುಂದಾಗಿರುವುದನ್ನ ಖಂಡಿಸಿ ಕನ್ನಡ ಒಕ್ಕೂಟ ಸಂಘಟನೆ ವತಿಯಿಂದ ಪ್ರತಿಭಟನೆ ಮಾಡಲಾಯ್ತು.
ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ನಾಗರಾಜ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಈ ವೇಳೆ ಮಾತ್ನಾಡಿದ ಅವರು, ತಮಿಳುನಾಡಿನಲ್ಲಿ ಬಿಜೆಪಿ ಚುನಾವಣೆ ಗೆಲ್ಲುಲು ಕಾವೇರಿ ನದಿಯನ್ನ ಬಲಿ ಕೊಡಲಾಗ್ತಿದೆ ಎಂದು ಕಿಡಿ ಕಾರಿದ್ರು.
ಕಳೆದ 6 ತಿಂಗಳಿನಿಂದ 115 ಕಿಲೋ ಮೀಟರ್ ಉದ್ದದ ಕಾಲುವೆ ಜೋಡಣೆ ಸಂಬಂಧ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ 700 ಕೋಟಿ ಬಿಡುಗಡೆ ಮಾಡಿದೆ. ಇದರ ಉದ್ಘಾಟನೆಗೆ ಪ್ರಧಾನಿ ಬರ್ತಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನಿರ್ಲಕ್ಷ್ಯವಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.