ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್ ಈ ಸಂಬಂಧ ಹೊಸ ಪೀಠ ರಚನೆ ಮಾಡಿದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ರಾಜ್ಯದ ಜನರ, ರೈತರ ಹಿತ ಕಾಪಾಡಿದರೆ ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಕಾವೇರಿ ನದಿ ಪಾತ್ರದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಸ್ಪಂದಿಸಬೇಕಿದೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರು. ರಾಜ್ಯದ ಜನರು, ರೈತರು, ಬೆಂಗಳೂರು ಭಾಗದ ಜನರಿಗೆ ಉತ್ತರಿಸಲಿ. ರೈತರನ್ನು ಕೋರ್ಟಿಗೆ ಹೋಗಿ ಅಂದರೆ ಹೇಗೆ ಅಂತಾ ವಾಗ್ದಾಳಿ ನಡೆಸಿದರು.