ಪ್ರಜಾಸ್ತ್ರ ಸುದ್ದಿ
ಮಂಡ್ಯ: ತಮಿಳುನಾಡಿಗೆ ಕಾವೇರಿಯಿಂದ ನೀರು ಹರಿಸಿರುವುದಕ್ಕೆ ಈ ಭಾಗದ ರೈತರ ಪ್ರತಿಭಟನೆ ಮುಂದುವರೆದಿದೆ. ಮಂಗಳವಾರ ತಾಲೂಕಿನ ಇಂಡವಾಳು ಹತ್ತಿರ ರೈತ ಮೂಲ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ಎತ್ತಿನ ಗಾಡಿಗಳ ಮೂಲಕ ಬೆಂಗಳೂರು-ಮೈಸೂರು ಹೆದ್ದಾರಿ ತಡೆಯಲು ಯತ್ನಿಸಲಾಗಿದೆ. ಇದರಿಂದಾಗಿ ಪೊಲೀಸರು ಹಾಗೂ ಪ್ರತಿಭಟನಾಕಾರ ನಡುವೆ ಮಾತಿನಕ ಚಕಮಕಿ ನಡೆಯಿತು. ಪೊಲೀಸರು ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದಿದ್ದಾರೆ.