ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾವೇರಿ ನೀರಿಗಾಗಿ ಕಳೆದ 2016ರಲ್ಲಿ ಹೋರಾಟ ಮಾಡಿದ ನೂರಾರು ಜನರಿಗೆ ಕೋರ್ಟ್ ಸಮೆನ್ಸ್ ನೀಡಿದೆ. ರೈತರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ 139 ರೈತರಿಗೆ ಸಮೆನ್ಸ್ ನೀಡಲಾಗಿದೆ.
ರೈತರ ಮೇಲಿನ ಪ್ರಕರಣ ವಾಪಸ್ ಪಡೆಯುವಲ್ಲಿ ರಾಜಕಾರಣಿಗಳ ನಿರ್ಲಕ್ಷ್ಯದಿಂದಾಗಿ ನೋಟಿಸ್ ಬಂದಿದೆ. ಇದರಿಂದಾಗಿ ರೈತರು ಕಾನೂನು ಹೋರಾಟ ಮಾಡಬೇಕಿದೆ. ಒಂದು ತಿಂಗಳೊಳಗೆ ಪ್ರಕರಣ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.