ಕವಿಶೈಲದಿಂದ ತೀರ್ಥಹಳ್ಳಿವರೆಗೆ ಶುರುವಾದ ಪಾದಯಾತ್ರೆ

254

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ಬಸವಣ್ಣ, ಕುವೆಂಪು ಸೇರಿದಂತೆ ನಾಡಿನ ಶರಣರನ್ನು, ಸಂತರನ್ನು, ಸಾಹಿತಿಗಳನ್ನು ಅವಮಾನಿಸಿರುವುದು ಸೇರಿದಂತೆ ಇತಿಹಾಸ ತಿರುಚುವ ಕೆಲಸ ಮಾಡಲಾಗಿದೆ ಎಂದು, ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿಯವರೆಗೂ ಪಾದಯಾತ್ರೆ ನಡೆಸಲಾಗುತ್ತಿದೆ. ಸುಮಾರು 18 ಕಿಲೋ ಮೀಟರ್ ಪಾದಯಾತ್ರೆ ಮಧ್ಯಾಹ್ನದ ವೇಳೆಗೆ ಟೌನ್ ಹಾಲ್ ತಲುಪಲಿದೆ.

ಬೆಳಗ್ಗೆ 7 ಗಂಟೆಗೆ ಕುವೆಂಪು ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಗಣ್ಯರು ಪಾದಯಾತ್ರೆ ಆರಂಭಿಸಿದರು. ಮಧ್ಯಾಹ್ನ 12 ಗಂಟೆಗೆ ಬಹಿರಂಗ ಸಭೆ ನಡೆಸಲಿದ್ದು, ಅಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ರಮೇಶ್ ಕುಮಾರ್, ವೈ.ಎಸ್ ವಿ ದತ್ತ ಸೇರಿ ಅನೇಕು ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!