ಕೆ.ಸಿ ರಾಮಮೂರ್ತಿ ರಾಜ್ಯಸಭೆಗೆ ಅವಿರೋಧ ಆಯ್ಕೆ

434

ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಬಿಜೆಪಿಯ ಕೆ.ಸಿ ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಕೆ.ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಜ್ಯಸಭೆಗೆ ಡಿಸೆಂಬರ್ 12ರಂದು ಚುನಾವಣೆ ನಡೆಯಬೇಕಿತ್ತು. ಕೆ.ಸಿ ರಾಮಮೂರ್ತಿ ಹೊರತು ಪಡಿಸಿ ಯಾರೂ ಎಲೆಕ್ಷನ್ ಗೆ ನಾಮಪತ್ರ ಸಲ್ಲಿಸಿರ್ಲಿಲ್ಲ. ಹೀಗಾಗಿ ಕೆ.ಸಿ ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ಎಂ.ಕೆ ವಿಶಾಲಕ್ಷಿ ಘೋಷಿಸಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಸಿ ರಾಮಮೂರ್ತಿ ಅವರು 2016ರಲ್ಲಿ ಕಾಂಗ್ರೆಸ್ ನಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ರು. ಇದೀಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!