ನವದೆಹಲಿ: ಕಳೆದವಾರ ರಾಜ್ಯಸಭಾ ಸದಸ್ಯತ್ವ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದ ಕೆ.ಸಿ ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ರು. ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ಹಾಗೂ ಕೇಂದ್ರ ಸಚಿವ ಪಹ್ಲಾದ ಜೋಶಿ ನೇತೃತ್ವದಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದ್ರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತ್ನಾಡಿದ ಕೆ.ಸಿ ರಾಮಮೂರ್ತಿ, ತುಂಬಾ ಸಂತೋಷದಿಂದ ಬಿಜೆಪಿ ಸೇರಿದ್ದೇನೆ. ಎರಡೂವರೆ ವರ್ಷ ಕೈಲಾದ ಕೆಲಸ ಮಾಡಿದ್ದೇನೆ. ಆದ್ರೂ ಬಹಳ ಸಾರಿ ಆತ್ಮವಂಚನೆ ಮಾಡಿಕೊಂಡಿದ್ದೇನೆ ಅಂತಾ ಹೇಳಿದ್ರು. ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದೇನೆ ಅಂತಾ ಹೇಳಿದ್ರು.