ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಕವಿತಾ ಅವರ ಮಾಜಿ ಆಡಿಟರ್ ಅವರನ್ನು ಸಿಬಿಐ ಬಂಧಿಸಿದೆ. ಸಿಎ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ಸಿಬಿಐ ಬಂಧಿಸಿದೆ.
ತೆಲಂಗಾಣ ಸಿಎಂ ಕೆ.ಸಿ ಚಂದ್ರಶೇಖರ್ ರಾವ್ ಅವರ ಪುತ್ರಿ ಎಂಎಲ್ಸಿ ಕವಿತಾ ಅವರ ಮಾಜಿ ಸಹಾಯಕ ಎಂದು ಹೇಳಲಾಗುತ್ತಿದೆ. ಸಗಟು ಹಾಗೂ ಚಿಲ್ಲರೆ ಪರವಾನಿಗೆದಾರರು ಹಾಗೂ ಅವರ ಲಾಭದಾಯಕ ಮಾಲೀಕರಿಗೆ ತಪ್ಪಾದ ಲಾಭ ಮಾಡುವ ಕೆಲಸ ಮಾಡಿಸಲಾಗಿದೆ ಎಂದು ಸಿಬಿಐ ಆರೋಪಿಸಿದ್ದು, ಇಂದು ಅವರನ್ನು ಕೋರ್ಟಿಗೆ ಹಾಜರುಪಡಿಸಲಾಗುತ್ತಿದೆ.