ಮೂವರು ಗಣ್ಯರಿಗೆ ಕೆಂಪೇಗೌಡ ಪ್ರಶಸ್ತಿ

265

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಎಲ್ಲೆಡೆ ನಾಡಪ್ರಭು ಕೆಂಪೇಗೌಡ ಅವರ 513ನೇ ಜಯಂತಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಜಯಂತಿ ಆಚರಿಸಲಾಯಿತು.

ಈ ವೇಳೆ ಸರ್ಕಾರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಯ ಮೊದಲ ಪ್ರದಾನ ಸಮಾರಂಭ ನಡೆಯಿತು. ಹಿರಿಯ ರಾಜಕಾರಣಿ ಎಸ್.ಎಂ ಕೃಷ್ಣ, ಇನ್ಪೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾರಾಯಣಮೂರ್ತಿ ಅವರ ಪರವಾಗಿ ಅವರ ಪತ್ನಿ ಸುಧಾಮೂರ್ತಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ನಿರ್ಮಲಾನಂದ ಮಹಾಸ್ವಾಮಿಗಳು, ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಸಿಎಂ ಬೊಮ್ಮಾಯಿ, ಸಚಿವರಾದ ಅಶ್ವಥನಾರಾಯಣ, ಆರ್.ಅಶೋಕ, ಗೋಪಾಲ ನಾಯಕ ಸೇರಿದಂತೆ ಹಲವರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!