‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

587

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ಸಾಹಿತಿ ಡಿ.ಎನ್ ನಾಗಭೂಷಣ ಅವರ ಗಾಂಧಿ ಕಥನ ಕೃತಿ 2021ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಫಲಕ ಒಳಗೊಂಡಿದೆ.

ಇನ್ನು ಯುವ ಪುರಸ್ಕಾರಕ್ಕೆ ಎಚ್.ಲಕ್ಷ್ಮಿನಾರಾಯಣ ಸ್ವಾಮಿ ಅವರ ತೊಗಲ ಚೀಲದ ಕರ್ಣ ಕೃತಿ ಆಯ್ಕೆ ಆಗಿದೆ. ಬಾಲ ಪುರಸ್ಕಾರಕ್ಕೆ ಬಸು ಬೇವಿನಗಿಡದ ಅವರ ಓಡಿ ಹೋದ ಹುಡುಗ ಅನ್ನೋ ಮಕ್ಕಳ ಕಾದಂಬರಿ ಆಯ್ಕೆಯಾಗಿದೆ. ಈ ಎರಡು ಪ್ರಶಸ್ತಿಯು 50 ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.

ಪ್ರಶಸ್ತಿಗೆ ಆಯ್ಕೆಯಾದ ಲೇಖಕರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ್ ಕಂಬಾರ ಅಭಿನಂದನೆ ಸಲ್ಲಿಸಿದ್ದಾರೆ. ಫೆಬ್ರವರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!