ಪ್ರಜಾಸ್ತ್ರ ಸುದ್ದಿ
ಮಂಡ್ಯ: ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿನ ಧ್ವಜ ಕಂಬದಲ್ಲಿ ಹನುಮಾನ ಧ್ವಜ ಹಾರಿಸುವ ಮೂಲಕ ವಿವಾದ ಹುಟ್ಟು ಹಾಕಿರುವ ಘಟನೆ ಸಂಬಂಧ ಪರಿಸ್ಥಿತಿ ಹೆದಗೆಟ್ಟಿದೆ. ಘಟನೆ ಕುರಿತು ಮಾತನಾಡಿರುವ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ, ಹನುಮಾನ ಧ್ವಜ ತೆಗೆದು ತಾಲಿಬಾನ್ ಧ್ವಜ ಏರಿಸಲು ಉದ್ದೇಶಿಸಿದ್ದರು ಎನ್ನುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಈ ಹೇಳಿಕೆಯನ್ನು ಕಾಂಗ್ರೆಸ್ ಸೇರಿದಂತೆ ಎಲ್ಲರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಬರೆದಿರುವ ಕಾಂಗ್ರೆಸ್, ಪವಿತ್ರವಾದ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದೆ ದೇಶದ್ರೋಹಿ ಬಿಜೆಪಿ. ಸಿ.ಟಿ ರವಿ ಎನ್ನುವ ಕೋಮು ಕ್ರಿಮಿ ದೇಶದ ಘನತೆಯನ್ನು ಮಣ್ಣುಪಾಲು ಮಾಡುವ ಹೇಳಿಕೆ ನೀಡಿದ್ದಾರೆ. ತ್ರಿವರ್ಣ ಧ್ವಜ ಬಿಜೆಪಿ ಪ್ರಕಾರ ಈಗ ತಾಲಿಬಾನ್ ಧ್ವಜವಾಗಿದೆಯೇ? ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್ ಎಸ್ಎಸ್ ಸಿದ್ಧಾಂತವನ್ನು ಬಿಜೆಪಿ ಚಾಚೂ ತಪ್ಪದೆ ಪಾಲಿಸುತ್ತಿದೆ ಎಂದು ಕಿಡಿ ಕಾರಿದೆ.