ಪ್ರಜಾಸ್ತ್ರ ಸುದ್ದಿ
ತಿರುವನಂತಪುರಂ: ಕೇರಳದಲ್ಲಿನ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನೋಟಿಸ್ ನೀಡಿದ್ದರು. ಇದರಿಂದಾಗಿ ವಿಸಿಗಳು ಕೋರ್ಟ್ ಮೊರೆ ಹೋಗಿದ್ದು, ಇದೀಗ ರಾಜ್ಯಪಾಲರ ಕುಲಪತಿ ಹುದ್ದೆಯನ್ನು ಸುಗ್ರಿವಾಜ್ಞೆ ಮೂಲಕ ತೆಗೆದು ಹಾಕಲು ಕೇರಳ ಸರ್ಕಾರ ಮುಂದಾಗಿದೆಯಂತೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಕಾನೂನು ಇಲಾಖೆ ಸಿದ್ಧಪಡಿಸಿದ ಕರಡು ಸುಗ್ರಿವಾಜ್ಞೆಯನ್ನು ಸಚಿವ ಸಂಪುಟದ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗಿದೆ.