ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೇರಳ ಶಾಸಕ

241

ಪ್ರಜಾಸ್ತ್ರ ಸುದ್ದಿ

ಕಾಸರಗೋಡು: ಕೇರಳ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ನೂತನ ಶಾಸಕ ಎಕೆಎಂ ಅಶ್ರಪ್ ಕನ್ನಡದಲ್ಲಿ ಪ್ರಮಾಣ ಸ್ವೀಕರಿಸುವ ಮೂಲಕ ಕನ್ನಡಾಭಿಮಾನ ಮೆರದಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಅವರನ್ನ ಯುಡಿಎಫ್ ಅಭ್ಯರ್ಥಿ ಅಶ್ರಪ್ ಸೋಲಿಸಿ ಶಾಸಕರಾಗಿದ್ದಾರೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿದ್ದಾರೆ. ಅಲ್ದೇ ಮಂಜೇಶ್ವರ ತಾಲೂಕನ್ನ ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶವೆಂದು ಕೇರಳ ಸರ್ಕಾರ ಘೋಷಿಸಿದೆ. ಶಾಸಕ ಅಶ್ರಪ್ ಕನ್ನಡ ಪ್ರೀತಿ ಎಲ್ಲರ ಮೆಚ್ಚುಗೆ ಪಡೆದಿದೆ.




Leave a Reply

Your email address will not be published. Required fields are marked *

error: Content is protected !!