ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಇಂಡಿ ತಾಲೂಕಿನಲ್ಲಿನ ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಗಳಡಿ ಬರುವ ಕೆರೆಗಳಿಗೆ ಕೆಬಿಜೆಎನ್ ಎಲ್ ಕಾಲುವೆಗಳ ಮೂಲಕ ನೀರು ತುಂಬಿಸುಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ ಮನಗೂಳಿ ಹೇಳಿದ್ದಾರೆ.
ಸಿಂದಗಿ ಪಟ್ಟಣದ ಕೆರೆಗೆ ನಾರಾಯಣಪುರ ಎಡದಂಡೆ ಕಾಲುವೆಯಿಂದ ಇಂಡಿ ಶಾಖಾ ಕಾಲುವೆಯ ಮೂಲಕ ನೀರನ್ನು ಹರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವ ಎಮ್.ಸಿ.ಮನಗೂಳಿ ತಿಳಿಸಿದ್ದಾರೆ. ಈಗಾಗ್ಲೇ ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ, ವಿಜಯಪುರ ಜಿಲ್ಲಾಧಿಕಾರಿ ಹಾಗೂ ಕೆಬಿಜೆಎನ್ ಎಲ್ ವಿಭಾಗದ ಮುಖ್ಯ ಅಭಿಯಂತರಿಗೆ ಪತ್ರದ ಮೂಲಕ ಆದೇಶ ನೀಡಿದ್ದಾರೆ.
ನಾರಾಯಣಪುರ ಎಡದಂಡೆ ಕಾಲುವೆಯ 2 ಕಡೆಗಳಲ್ಲಿ ದುರಸ್ತಿ ಕಾಮಗಾರಿಗಳನ್ನ ಕೈಗೊಂಡಿದ್ದು, ಕಾಮಗಾರಿಯನ್ನ ಬೇಗ ಮುಗಿಸಿ ಎಂದು ಆದೇಶ ನೀಡಲಾಗಿದೆ. ದುರಸ್ತಿ ಕಾರ್ಯ ಪೂರ್ಣಗೊಂಡ ನಂತರ ಆಲಮಟ್ಟಿ ಜಲಾಶಯದಿಂದ ೦.7 ಟಿಎಂಸಿ ನೀರನ್ನ ನಾರಾಯಣಪುರ ಜಲಾಶಯಕ್ಕೆ ಹರಿಬಿಟ್ಟು, ಅಲ್ಲಿಂದ ಸಿಂದಗಿ ಪಟ್ಟಣ ಹಾಗೂ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿಗೆ ಕುಡಿಯುವ ಉದ್ದೇಶಕ್ಕಾಗಿ ನೀರನ್ನ ಒದಗಿಸಲಾಗುವುದು. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಎಂ.ಸಿ.ಮನಗೂಳಿ ಹೇಳಿದ್ದಾರೆ.