ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಏಪ್ರಿಲ್ 14 ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿರುವ ಕನ್ನಡದ ಕೆಜಿಎಫ್-2 ಚಿತ್ರದ ವಿರುದ್ಧ, ಕಲ್ಯಾಣ ಕರ್ನಾಟಕ ವೇದಿಕೆ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಚಿತ್ರದಲ್ಲಿ ಕ್ರೌರ್ಯವನ್ನು ಹೆಚ್ಚಿಗೆ ತೋರಿಸಿ ವಿಜೃಂಭಿಸಲಾಗಿದೆ ಎಂದು ಹೇಳಿ ಚಿತ್ರದ ಬಿಡುಗಡೆಗೆ ತಡೆ ಕೋರಿ ವೇದಿಕೆ ಅಧ್ಯಕ್ಷ ಅಶೋಕ್ ಕುಮಾರ್ ಅಲಿಯಾಸ್ ದುಮ್ಮೇನಹಳ್ಳಿ ಅಶೋಕ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ.
ಕೆಜಿಎಫ್ ಸಿನಿಮಾಗೆ ಸಾಮಾಜಿಕ ಬದ್ಧತೆ ಇಲ್ಲ. ಬರೀ ಚಾಕು, ಚೂರಿ ತೋರಿಸಲಾಗಿದೆ. ಗನ್ ನಲ್ಲಿ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದು ಮಕ್ಕಳ ಮೇಲೆ ಎಷ್ಟೊಂದು ಪರಿಣಾಮ ಬೀರಬಹುದು. ಇಂತಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೆನ್ಸಾರ್ ಬೋರ್ಡ್ ಗೆ ದೂರು ಸಲ್ಲಿಸಿದ್ದೇವು. ಆದರೆ, ಯುಎ ಸರ್ಟಿಫಿಕೇಟ್ ನೀಡಲಾಗಿದೆ ಎಂದು ದೂರಿದ್ದಾರೆ.
ಕನ್ನಡ ಚಿತ್ರ ವಿಶ್ವಮಟ್ಟದಲ್ಲಿ ಸುದ್ದಿ ಮಾಡುತ್ತಿರುವುದು ಖುಷಿಯ ವಿಚಾರ. ಆದರೆ, ಅಪರಾಧಕ್ಕೆ ಪ್ರೇರಣೆ ಎಂಬಂತೆ ಕ್ರೌರ್ಯದ ವಿಜೃಂಭಣೆಯಿದೆ. ಹೀಗಾಗಿ ಕೋರ್ಟ್ ನಲ್ಲಿ ಮನವಿ ಸಲ್ಲಿಸಲಾಗಿದೆ. ಇದರ ವಿಚಾರಣೆ ನಾಳೆಯಿದೆ ಎಂದು ಹೇಳಿದ್ದಾರೆ.